ADVERTISEMENT

ಪಾಕಿಸ್ತಾನಿ ಪಡೆಗಳ ಗುಂಡಿನ ದಾಳಿಗೆ ಇಬ್ಬರು ಯೋಧರು ಹುತಾತ್ಮ

ಏಜೆನ್ಸೀಸ್
Published 12 ಜುಲೈ 2017, 19:05 IST
Last Updated 12 ಜುಲೈ 2017, 19:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೆರೆನ್‌ ವಲಯದಲ್ಲಿನ ಗಡಿನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಬುಧವಾರ ಮರೆಯಲ್ಲಿ
ನಿಂತು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.

ಫರ್ಕಿಯಾ ಗಲಿಯಲ್ಲಿ ಈ ಘಟನೆ ನಡೆದಿದೆ. ಪ್ರಾಣ ಕಳೆದುಕೊಂಡ ಇಬ್ಬರನ್ನು ಲ್ಯಾನ್ಸ್‌ ನಾಯಕ್‌ ಎಲ್‌.ಎನ್‌. ರಂಜಿತ್‌ ಸಿಂಗ್‌ ಮತ್ತು ರೈಫಲ್‌ಮನ್ ಸತೀಶ್‌ ಭಗತ್‌ ಎಂದು ಗುರುತಿಸಲಾಗಿದೆ. ಇವರು ಜಮ್ಮು ಮತ್ತು ಕಾಶ್ಮೀರ ರೈಫಲ್ಸ್‌ಗೆ ಸೇರಿದವರು. ದಾಳಿಯಲ್ಲಿ ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ ಮೂಲಗಳು ತಿಳಿಸಿವೆ.

ಸಾಮಾನ್ಯವಾಗಿ ಈ ಪ್ರದೇಶದಿಂದ ಪಾಕಿಸ್ತಾನದ ಉಗ್ರರು ಕಾಶ್ಮೀರ ಕಣಿವೆಯತ್ತ ನುಸುಳುತ್ತಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.