ನವದೆಹಲಿ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿಯ ಗಡಿನಿಯಂತ್ರಣ ರೇಖೆಗುಂಟ ಪಾಕ್ ಮತ್ತೆ ಕದನವಿರಾಮ ಉಲ್ಲಂಘಿಸಿದೆ.
ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಪಾಕ್ ಪಡೆಗಳು ಪೂಂಚ್ ಜಿಲ್ಲೆಯ ಮೆಂದಾರ್ ವಲಯದಲ್ಲಿ ಭಾರತೀಯ ಪಡೆಗಳ ಮೇಲೆ ಗುಂಡುಹಾರಿಸಿದ್ದು, ಇದಕ್ಕೆ ಭಾರತ ಪ್ರತಿದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 3 ರಂದು ಪಾಕ್ ಪಡೆಗಳು ಕದನವಿರಾಮ ಉಲ್ಲಂಘಿಸಿ ಭಾರತದ ಸೇನಾ ಶಿಬಿರಗಳ ಮೇಲೆ ದಾಳಿ ನಡೆಸಿದ್ದವು. ಪೂಂಚ್ ಜಿಲ್ಲೆಯ ಜನವಸತಿ ಪ್ರದೇಶಗಳನ್ನೇ ಗುರಿಯಾಗಿಟ್ಟುಕೊಂಡು ಈ ದಾಳಿ ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.