ನವದೆಹಲಿ: ಪಾಕಿಸ್ತಾನದ ವಿರುದ್ಧ ಆಕ್ರಮಣಕಾರಿ ನಿಲುವನ್ನು ತ್ಯಜಿಸಿ, ಮಾತುಕತೆಗೆ ಭಾರತ ಮುಂದಾಗಬೇಕು ಎಂದು ಸಿಪಿಎಂ ಗುರುವಾರ ಹೇಳಿದೆ.
ಸಿಪಿಎಂನ ಮುಖವಾಣಿ ‘ಪೀಪಲ್ಸ್ ಡೆಮಾಕ್ರಸಿ’ಯಲ್ಲಿ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಅವರು ಬರೆದ ಸಂಪಾದಕೀಯದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.
‘ಪಾಕಿಸ್ತಾನದ ಜೊತೆಗಿನ ಮಾತುಕತೆಯ ಎಲ್ಲಾ ಮಾರ್ಗಗಳನ್ನು ಸರ್ಕಾರವೇ ಮುಚ್ಚಿರುವುದರಿಂದ ಈ ವಿಚಾರವು ಮೂಲೆಗುಂಪಾಗುವಂತೆ ಮಾಡಿದೆ. ಅಂತರರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಕದನವಿರಾಮ ಪುನಃಸ್ಥಾಪಿಸಿ, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಭಾರತ ಮಾತುಕತೆ ಆರಂಭಿಸುವುದು ಅಗತ್ಯವಾಗಿದೆ’ ಎಂದು ಅವರು ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.