ADVERTISEMENT

‘ಪಾಕ್‌ ಜೊತೆ ಮಾತುಕತೆ ಅಗತ್ಯ’

ಪಿಟಿಐ
Published 1 ಮಾರ್ಚ್ 2018, 19:35 IST
Last Updated 1 ಮಾರ್ಚ್ 2018, 19:35 IST
ಸಾಂದರ್ಭಿಕ ಚಿತ್ರ.
ಸಾಂದರ್ಭಿಕ ಚಿತ್ರ.   

ನವದೆಹಲಿ: ಪಾಕಿಸ್ತಾನದ ವಿರುದ್ಧ ಆಕ್ರಮಣಕಾರಿ ನಿಲುವನ್ನು ತ್ಯಜಿಸಿ, ಮಾತುಕತೆಗೆ ಭಾರತ ಮುಂದಾಗಬೇಕು ಎಂದು ಸಿಪಿಎಂ ಗುರುವಾರ ಹೇಳಿದೆ.

ಸಿಪಿಎಂನ ಮುಖವಾಣಿ ‘ಪೀಪಲ್ಸ್ ಡೆಮಾಕ್ರಸಿ’ಯಲ್ಲಿ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಅವರು ಬರೆದ ಸಂಪಾದಕೀಯದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

‘ಪಾಕಿಸ್ತಾನದ ಜೊತೆಗಿನ ಮಾತುಕತೆಯ ಎಲ್ಲಾ ಮಾರ್ಗಗಳನ್ನು ಸರ್ಕಾರವೇ ಮುಚ್ಚಿರುವುದರಿಂದ ಈ ವಿಚಾರವು ಮೂಲೆಗುಂಪಾಗುವಂತೆ ಮಾಡಿದೆ. ಅಂತರರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಕದನವಿರಾಮ ಪುನಃಸ್ಥಾಪಿಸಿ, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಭಾರತ ಮಾತುಕತೆ ಆರಂಭಿಸುವುದು ಅಗತ್ಯವಾಗಿದೆ’ ಎಂದು ಅವರು ಉಲ್ಲೇಖಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.