ನವದೆಹಲಿ(ಪಿಟಿಐ): ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ನಿರ್ಮಾಣ ಮತ್ತು ನಿರ್ವಹಣೆಯ ಕಾಮಗಾರಿಯಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಂತೆ ಪ್ರಧಾನಿ ಮನಮೋಹನ ಸಿಂಗ್ ಕರೆ ನೀಡಿದ್ದಾರೆ.
ಸೋಮವಾರ ಇಲ್ಲಿ ನಡೆದ `ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ನಿರ್ವಹಣೆಯಲ್ಲಿನ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವ~ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೆದ್ದಾರಿಗಳ ನಿರ್ಮಾಣ ಮತ್ತು ನಿರ್ವಹಣೆಯ ಗುತ್ತಿಗೆ ನೀಡಿಕೆಯಲ್ಲಿ ಮುಕ್ತ ಹಾಗೂ ಪಾರದರ್ಶಕತೆ ಕಾಯ್ದುಕೊಳ್ಳುವ ಅನಿವಾರ್ಯತೆ ಇದೆ.
ಇದರಿಂದ ಸರ್ಕಾರ ಯಾರ ಪಕ್ಷಪಾತಿಯೂ ಅಲ್ಲ ಎಂಬುದನ್ನು ದೇಶದ ಜನರಿಗೆ ಸ್ಪಷ್ಟಪಡಿಸುವ ಅಗತ್ಯವೂ ಇದೆ ಎಂದು ಅವರು ಅಭಿಪ್ರಾಯಪಟ್ಟರು.
ಹೆದ್ದಾರಿ ನಿರ್ಮಾಣ ವಲಯದಲ್ಲಿನ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು 2012-17ರ ಪಂಚವಾರ್ಷಿಕ ಯೋಜನೆಯಲ್ಲಿ ಒಂದು ಲಕ್ಷ ಕೋಟಿ ಡಾಲರ್ ತೊಡಗಿಸಲಿದೆ ಎಂದು ಸಿಂಗ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.