ನವದೆಹಲಿ (ಪಿಟಿಐ): ‘ಪ್ರಜಾವಾಣಿ’ ಸಂಪಾದಕ ಕೆ.ಎನ್.. ಶಾಂತಕುಮಾರ್ ಅವರು ಪಿಟಿಐನ (ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜಾಗರಣ್ ಸಮೂಹದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ಸಂಪಾದಕ ಮಹೇಂದ್ರ ಮೋಹನ್ ಗುಪ್ತಾ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನವದೆಹಲಿಯಲ್ಲಿ ಮಂಗಳವಾರ ನಡೆದ ಪಿಟಿಐನ 65ನೇ ವಾರ್ಷಿಕ ಮಹಾಸಭೆಯ (ಎಜಿಎಂ) ಬಳಿಕ ನಡೆದ ಮಂಡಳಿಯ ಸಭೆಯಲ್ಲಿ ಶಾಂತಕುಮಾರ್ ಮತ್ತು ಗುಪ್ತಾ ಅವರನ್ನು ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.