ADVERTISEMENT

ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಕ್ಕೆ ರಜನಿಕಾಂತ್ ಅಸಮಾಧಾನ

ಏಜೆನ್ಸೀಸ್
Published 11 ಏಪ್ರಿಲ್ 2018, 13:02 IST
Last Updated 11 ಏಪ್ರಿಲ್ 2018, 13:02 IST
ರಜನಿಕಾಂತ್ (ಸಂಗ್ರಹ ಚಿತ್ರ)
ರಜನಿಕಾಂತ್ (ಸಂಗ್ರಹ ಚಿತ್ರ)   

ಚೆನ್ನೈ: ಐಪಿಎಲ್ ಕ್ರಿಕೆಟ್ ಪಂದ್ಯ (ಇಂಡಿಯನ್ ಪ್ರೀಮಿಯರ್ ಲೀಗ್) ವಿರೋಧಿಸಿ ಪ್ರತಿಭಟನೆ ನಡೆಸಿದ ಗುಂಪು ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಕ್ಕೆ ನಟ ರಜನಿಕಾಂತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಸಮವಸ್ತ್ರ ತೊಟ್ಟು ಕರ್ತವ್ಯದಲ್ಲಿರುವ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಹಿಂಸೆಯ ಪರಾಕಾಷ್ಠೆ’ ಎಂದು ಅವರು ಬುಧವಾರ ಟ್ವೀಟ್ ಮಾಡಿದ್ದಾರೆ. ಹಲ್ಲೆಯ ವಿಡಿಯೊವನ್ನೂ ಅವರು ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT