ನವದೆಹಲಿ (ಪಿಟಿಐ): ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಪ್ರಕೃತಿ ಚಿಕಿತ್ಸೆಗಾಗಿ ಗುರುವಾರ ಬೆಂಗಳೂರಿಗೆ ತೆರಳಲಿದ್ದಾರೆ.
ಗುಡಗಾಂವ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂರು ದಿನಗಳ ಕಾಲ ಚಿಕಿತ್ಸೆ ಪಡೆದಿರುವ 74 ವರ್ಷದ ಅಣ್ಣಾ, ನವದೆಹಲಿಯಿಂದ ವಿಮಾನದ ಮೂಲಕ ಬೆಳಿಗ್ಗೆ ಬೆಂಗಳೂರು ತಲುಪಿ ಜಿಂದಾಲ್ ಪ್ರಕೃತಿ ಚಿಕಿತ್ಸಾ ಸಂಸ್ಥೆಯಲ್ಲಿ ದಾಖಲಾಗಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
`ಶೀಘ್ರವೇ ನನ್ನ ಆರೋಗ್ಯ ಸುಧಾರಣೆಯಾಗಲಿದ್ದು, ನಂತರ ದೇಶವ್ಯಾಪಿ ಪ್ರವಾಸ ಕೈಗೊಳ್ಳುವೆ~ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.