ADVERTISEMENT

‘ಪ್ರಜ್ಞಾ ಭಾರತದಆತ್ಮ ಕೊಲ್ಲುತ್ತಿದ್ದಾರೆ’

​ಪ್ರಜಾವಾಣಿ ವಾರ್ತೆ
Published 18 ಮೇ 2019, 20:01 IST
Last Updated 18 ಮೇ 2019, 20:01 IST
ಕೈಲಾಶ್‌ ಸತ್ಯಾರ್ಥಿ
ಕೈಲಾಶ್‌ ಸತ್ಯಾರ್ಥಿ   

ನವದೆಹಲಿ: ‘ಮಹಾತ್ಮ ಗಾಂಧಿ ಅವರು ಅಧಿಕಾರ ಮತ್ತು ರಾಜಕಾರಣಕ್ಕಿಂತ ಎತ್ತರದ ಸ್ಥಾನದಲ್ಲಿದ್ದಾರೆ. ಬಿಜೆಪಿ ನಾಯಕಿ ಪ್ರಜ್ಞಾ ಸಿಂಗ್‌ ಅವರಂತಹವರು ಭಾರತದ ಜನರ ಆತ್ಮವನ್ನೇ ಕೊಲೆ ಮಾಡುತ್ತಿದ್ದಾರೆ. ಆದ್ದರಿಂದ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಬೇಕು’ ಎಂದು ನೊಬೆಲ್‌ ಪುರಸ್ಕೃತ ಕೈಲಾಶ್‌ ಸತ್ಯಾರ್ಥಿ ಹೇಳಿದ್ದಾರೆ.

ಮಾಲೇಗಾಂವ್‌ ಸ್ಫೋಟ ಪ್ರಕರಣದ ಆರೋಪಿ ಹಾಗೂ ಭೋಪಾಲ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್‌ ಠಾಕೂರ್‌ ಚುನಾವಣಾ ರ‍್ಯಾಲಿಯಲ್ಲಿ ಗಾಂಧಿ ಹಂತಕನನ್ನು ‘ದೇಶಭಕ್ತ’ ಎಂದು ಹೊಗಳಿದ್ದ ಹೇಳಿಕೆಗೆ ಸತ್ಯಾರ್ಥಿ ಪ್ರತಿಕ್ರಿಯಿಸಿದ್ದಾರೆ. ‘ಗೋಡ್ಸೆ, ಗಾಂಧಿ ಅವರ ದೇಹ ಕೊಲೆ ಮಾಡಿದ. ಆದರೆ ಪ್ರಜ್ಞಾ ದೇಶದ ಅಹಿಂಸೆ, ಶಾಂತಿಯನ್ನೇ ಕೊಲೆ ಮಾಡುತ್ತಿದ್ದಾರೆ’ ಎಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT