ADVERTISEMENT

ಪ್ರತಿದಾಳಿ: ಇಬ್ಬರು ಪಾಕಿಸ್ತಾನ ಸೈನಿಕರ ಹತ್ಯೆಗೈದ ಭಾರತೀಯ ಸೇನೆ

ಪಿಟಿಐ
Published 15 ಜೂನ್ 2017, 5:28 IST
Last Updated 15 ಜೂನ್ 2017, 5:28 IST
ಪ್ರತಿದಾಳಿ: ಇಬ್ಬರು ಪಾಕಿಸ್ತಾನ ಸೈನಿಕರ ಹತ್ಯೆಗೈದ ಭಾರತೀಯ ಸೇನೆ
ಪ್ರತಿದಾಳಿ: ಇಬ್ಬರು ಪಾಕಿಸ್ತಾನ ಸೈನಿಕರ ಹತ್ಯೆಗೈದ ಭಾರತೀಯ ಸೇನೆ   

ಜಮ್ಮು: ಜಮ್ಮು ಕಾಶ್ಮೀರದ ರಜೌರಿ ಮತ್ತು ಪೂಂಚ್‌ ಜಿಲ್ಲೆಯ ವ್ಯಾಪ್ತಿಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಭದ್ರತಾ ಪಡೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪ್ರತಿ ದಾಳಿ ನಡೆಸಿದ ಭಾರತೀಯ ಸೇನೆ ಪಾಕ್‌ನ ಇಬ್ಬರು ಸೈನಿಕರನ್ನು ಹತ್ಯೆಗೈದಿದೆ.

ಪಾಕಿಸ್ತಾನ ಪಡೆ ಸೇನಾ ನೆಲೆಗಳು ಹಾಗೂ ನಾಗರಿಕ ವಸತಿ ಪ್ರದೇಶಗಳನ್ನು ಗುರಿಯಾಗಿರಿಸಿ ಷೆಲ್, ಮಾರ್ಟರ್‌ ಬಾಂಬ್‌ ಮತ್ತು ಸಣ್ಣ ಪ್ರಮಾಣದ ಗುಂಡಿನ ದಾಳಿ ನಡೆಸಿದೆ.

ಈಚಿನ ಮೂರು ದಿನಗಳಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ 10 ಬಾರಿ ಗುಂಡಿನ ದಾಳಿ ನಡೆಸಿದೆ. ಜನವರಿ ಒಂದರಿಂದ ಈಚೆಗೆ ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಒಟ್ಟು 14 ಬಾರಿ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದು, ಒಬ್ಬ ನಾಗರಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ADVERTISEMENT

ಪಾಕ್‌ ದಾಳಿಗೆ ಭಾರತೀಯ ಪಡೆ ಪ್ರತಿದಾಳಿ ನಡೆಸಿದ್ದು, ಭಿಂಬೊರೆ ಗಲಿ ವಲಯದಲ್ಲಿ ಇಬ್ಬರು ಪಾಕಿಸ್ತಾನ ಸೈನಿಕರನ್ನು ಹೊಡೆದುರುಳಿಸಿದೆ ಎಂದು ಸೇನೆ ಮೂಲಗಳು ತಿಳಿಸಿವೆ.

ಪಾಕಿಸ್ತಾನ ಸೇನೆ ನೌಶೆರಾ ವಲಯ ಮತ್ತು ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ದಾಳಿ ನಡೆಸುತ್ತಿದ್ದು, ಮಾರ್ಟರ್ ಷೆಲ್‌ಗಳು, ಸಣ್ಣ ಶಸ್ತ್ರಾಸ್ತ್ರ, ಸ್ವಯಂ ಚಾಲಿತ ಬಂದೂಕುಗಳ ಮೂಲಕ ಗುಂಡಿನ ದಾಳಿ ಮಾಡಿದೆ. ಭಾರತೀಯ ಸೇನೆ ಪ್ರತಿ ದಾಳಿ ನಡೆಸಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್‌ ಮನೀಶ್ ಮೆಹ್ತಾ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.