ವಾಷಿಂಗ್ಟನ್ (ಪಿಟಿಐ): ಉತ್ತರಾಖಂಡ ಮತ್ತಿತರ ಕಡೆ ಪ್ರವಾಹದಿಂದ ಉಂಟಾಗಿರುವ ಸಂಕಷ್ಟಮಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭಾರತಕ್ಕೆ ಅಗತ್ಯ ನೆರವು ನೀಡಲು ಸಿದ್ಧವಿರುವುದಾಗಿ ಅಮೆರಿಕ ತಿಳಿಸಿದೆ.
ಹೆಲಿಪ್ಯಾಡ್ಗಳ ನಿರ್ಮಾಣ
ನವದೆಹಲಿ (ಪಿಟಿಐ): ಉತ್ತರಾಖಂಡದಲ್ಲಿ ನಡೆಸಲಾಗುತ್ತಿರುವ ಪರಿಹಾರ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಲು ಇನ್ನಷ್ಟು ಹೆಲಿಪ್ಯಾಡ್ಗಳನ್ನು ನಿರ್ಮಿಸಲು ಗಮನ ನೀಡಲಾಗುತ್ತಿದೆ ಎಂದು ಐಟಿಬಿಪಿ ಮುಖ್ಯಸ್ಥ ಅಜಯ್ ಛಡ್ಡಾ ಹೇಳಿದ್ದಾರೆ.
ಹೆಲಿಕಾಪ್ಟರ್ ಪತನ: ಪೈಲಟ್ಗೆ ಗಾಯ
ಡೆಹ್ರಾಡೂನ್ (ಪಿಟಿಐ): ರಕ್ಷಣಾ ಕಾರ್ಯದಲ್ಲಿ ನಿರತವಾಗಿದ್ದ ಖಾಸಗಿ ಹೆಲಿಕಾಪ್ಟರ್ ಒಂದು ಗೌರಿಕುಂಡ್ ಜಿಲ್ಲೆಯಲ್ಲಿ ಶುಕ್ರವಾರ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಪೈಲಟ್ ಗಾಯಗೊಂಡಿದ್ದಾರೆ ಪೊಲೀಸರು ತಿಳಿಸಿದ್ದಾರೆ.
ತಿಹಾರ್ ಕೈದಿಗಳಿಂದ ನೆರವು
ನವದೆಹಲಿ (ಪಿಟಿಐ): ಉತ್ತರಾಖಂಡದ ನೆರೆ ಸಂತ್ರಸ್ತರಿಗೆ ತಿಹಾರ್ ಜೈಲಿನ ಕೈದಿಗಳು ನೆರವಿನ ಹಸ್ತ ಚಾಚಲಿದ್ದಾರೆ.
ಜೈಲಿನ ಸಿಬ್ಬಂದಿಯ ಜೊತೆಗೆ ಕೆಲವು ಕೈದಿಗಳು ಕೂಡ ಸೇರಿ ್ಙ 13 ಲಕ್ಷವನ್ನು ಪರಿಹಾರ ಕಾರ್ಯಕ್ಕಾಗಿ ನೀಡಲಿದ್ದಾರೆ.
3 ದಿನದಲ್ಲಿ ಟವರ್-ಬಿಎಸ್ಎನ್ಎಲ್
ನವದೆಹಲಿ (ಪಿಟಿಐ): ಪ್ರವಾಹ ಪೀಡಿತ ಉತ್ತರಾಖಂಡದಲ್ಲಿ ಸಂತ್ರಸ್ತರು ಸಿಲುಕಿಕೊಂಡಿದ್ದ ಪ್ರಮುಖ ಸ್ಥಳಗಳಲ್ಲಿ ಮೂರು ದಿನಗಳ ಒಳಗಾಗಿ ಮೊಬೈಲ್ ಟವರ್ಗಳನ್ನು ಸ್ಥಾಪಿಸುವುದಾಗಿ ಬಿಎಸ್ಎನ್ಎಲ್ ಹೇಳಿದೆ.
`ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ'
ನವದೆಹಲಿ (ಪಿಟಿಐ): ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಲ್ಲಿ ಮಳೆ ಸೃಷ್ಟಿಸಿರುವ ಅನಾಹುತವನ್ನು `ರಾಷ್ಟ್ರೀಯ ವಿಪತ್ತು' ಎಂದು ಘೋಷಿಸುವಂತೆ ಗೃಹ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿ ಸರ್ವಾನುಮತದಿಂದ ಶಿಫಾರಸು ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.