ADVERTISEMENT

ಬಸ್ ಕಂದಕಕ್ಕೆ ಉರುಳಿ 27 ಸಾವು

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2011, 19:30 IST
Last Updated 26 ಅಕ್ಟೋಬರ್ 2011, 19:30 IST

ಶಿಮ್ಲಾ (ಐಎಎನ್‌ಎಸ್):   ಬಸ್ಸೊಂದು ಒಂದು ಸಾವಿರ ಅಡಿ ಆಳದ ಕಂದಕಕ್ಕೆ ಉರುಳಿದ್ದು, 27 ಮಂದಿ ಸಾವನ್ನಪ್ಪಿ 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಬಿಲ್ಸಾಪುರ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ಸಾಮೂಹಿಕ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಪ್ರೇಮ್ ಕುಮಾರ್ ದುಮಾಲ್  ಗಾಯಗೊಂಡಿರುವ ಪ್ರಯಾಣಿಕರು ದಾಖಲಾದ  ಬಿಲ್ಸಾಪುರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ  ಭೇಟಿ ನೀಡಿ ಗಾಯಾಳುಗಳನ್ನು ಚಿಕಿತ್ಸೆಯ ಬಗ್ಗೆ ವಿಚಾರಿಸಿದರು.

ಹಿಮಾಚಲ ಪ್ರದೇಶದ ವಿವಿಧೆಡೆ ಕಳೆದ 3 ವರ್ಷಗಳಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಸುಮಾರು ಮೂರೂವರೆ ಸಾವಿರ ಮಂದಿ ಸಾವನ್ನಪ್ಪಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.