ನವದೆಹಲಿ (ಪಿಟಿಐ): ದೆಹಲಿ ಹೈಕೋರ್ಟ್ನಲ್ಲಿ ಸೆ.7ರಂದು ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೃದುಲ್ ಬಕ್ಷಿ ಎಂಬಾತ ಗುರುವಾರ ಇಲ್ಲಿನ ರಾಮ ಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಘಟನೆಯಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿದೆ.
ಬಕ್ಷಿಯ ತಲೆ, ಹೃದಯ ಹಾಗೂ ಕೈಕಾಲುಗಳು ತೀವ್ರವಾಗಿ ಗಾಯಗೊಂಡಿದ್ದವು ಎಂದು ವೈದ್ಯರು ತಿಳಿಸಿದ್ದಾರೆ. ಬಕ್ಷಿ ದಕ್ಷಿಣ ದೆಹಲಿಯ ಒಕಾಲಾದ ನಿವಾಸಿಯಾಗಿದ್ದು, ಈತನಿಗೆ ಪತ್ನಿ ಹಾಗೂ ಆರು ತಿಂಗಳ ಗಂಡು ಮಗು ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.