ADVERTISEMENT

ಬಾರದ ಮಳೆ: ಹವಾಮಾನ ಇಲಾಖೆ ವಿರುದ್ಧ ದೂರು

ಪಿಟಿಐ
Published 14 ಜುಲೈ 2017, 20:20 IST
Last Updated 14 ಜುಲೈ 2017, 20:20 IST
ಬಾರದ ಮಳೆ: ಹವಾಮಾನ ಇಲಾಖೆ ವಿರುದ್ಧ ದೂರು
ಬಾರದ ಮಳೆ: ಹವಾಮಾನ ಇಲಾಖೆ ವಿರುದ್ಧ ದೂರು   

ಮುಂಬೈ: ‘ಹವಾಮಾನ ಇಲಾಖೆ ಅಧಿಕಾರಿಗಳು, ಹವಾಮಾನದ ತಪ್ಪು ಮುನ್ಸೂಚನೆ ನೀಡುವ ಮೂಲಕ ನಮಗೆ ನಷ್ಟ ಉಂಟು ಮಾಡಿದ್ದಾರೆ’ ಎಂದು ಮಹಾರಾಷ್ಟ್ರದ ಬೀಡ್‌ ಜಿಲ್ಲೆಯ ಹಳ್ಳಿಯೊಂದರ ರೈತರು ಪೊಲೀಸರಿಗೆ ದೂರು ನೀಡಿದ್ದಾರೆ.

‘ಹವಾಮಾನ ಇಲಾಖೆಯ ಪುಣೆ ಮತ್ತು ಕೊಲಬಾ ಕೇಂದ್ರಗಳ ಅಧಿಕಾರಿಗಳು, ‘ಜೂನ್‌–ಜುಲೈನಲ್ಲಿ ವಾಡಿಕೆ ಮಳೆಯಾಗುತ್ತದೆ’ ಎಂದು ಮುನ್ಸೂಚನೆ ನೀಡಿದ್ದರು. ಅದನ್ನು ನಂಬಿಕೊಂಡು ಇಲ್ಲಿನ ರೈತರು ಉಳುಮೆ ಕಾರ್ಯ ಮುಗಿಸಿದ್ದಾರೆ. ಬಹುತೇಕರು, ಗೊಬ್ಬರವನ್ನೂ ಹಾಕಿ, ಬಿತ್ತನೆಯನ್ನೂ ಮುಗಿಸಿದ್ದಾರೆ. ಆದರೆ, ಆರಂಭದ ಒಂದೆರಡು ದಿನ ಸಣ್ಣ ಮಳೆ ಬಂದದ್ದು ಬಿಟ್ಟರೆ ಮಳೆಯ ವಾತಾವರಣವೇ ಇಲ್ಲ. ಇಲಾಖೆಯ ಅಧಿಕಾರಿಗಳು ಬೀಜ ಮತ್ತು ಗೊಬ್ಬರ ತಯಾರಕರ ಜತೆ ಕೈಜೋಡಿಸಿ, ನಮ್ಮನ್ನು ವಂಚಿಸಿದ್ದಾರೆ. ಇದರಿಂದ ರೈತರಿಗೆ ನಷ್ಟವಾಗಿದೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ’ ಎಂದು ರೈತರು ದೂರಿನಲ್ಲಿ ಕೋರಿದ್ದಾರೆ.

ಪೊಲೀಸರು, ‘ದೂರನ್ನು ಪರಿಶೀಲಿಸುತ್ತೇವೆ’ ಎಂದಷ್ಟೇ ಹೇಳಿದ್ದಾರೆ. ಹವಾಮಾನ ಇಲಾಖೆಯ ಅಧಿಕಾರಿಗಳು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.