ನವದೆಹಲಿ: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ `ಬೆಂಗಳೂರು ನಗರದ ನಿರ್ಮಾತೃ' ಕೆಂಪೇಗೌಡರ ಹೆಸರು ನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಕೊನೆಗೂ ಬುಧವಾರ ಒಪ್ಪಿಗೆ ನೀಡಿತು.
ಪ್ರಧಾನಿ ಮನಮೋಹನ್ಸಿಂಗ್ ಅಧ್ಯಕ್ಷತೆಯಲ್ಲಿ ಸೇರಿದ್ದ ಸಂಪುಟದ ಸಭೆ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಲು ಒಪ್ಪಿಗೆ ನೀಡಿತು ಎಂದು ರೈಲ್ವೆ ಸಚಿವ ಎಂ. ಮಲ್ಲಿಕಾರ್ಜುನ ಖರ್ಗೆ `ಪ್ರಜಾವಾಣಿ'ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.