ಕೊಯಮತ್ತೂರು: ಇಲ್ಲಿನ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೈ ಪೆರಿಯಾರ್ ದ್ರಾವಿಡ ಕಳಗಂನ (ಟಿಪಿಡಿಕೆ) ಮೂವರು ಕಾರ್ಯಕರ್ತರನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾ ಅಧ್ಯಕ್ಷ ಸಿ.ಆರ್.ನಂದಕುಮಾರ್ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದವರ ಪತ್ತೆಗೆ ಕಾರ್ಯಾಚರಣೆ ನಡೆದಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.