
ಪ್ರಜಾವಾಣಿ ವಾರ್ತೆನವದೆಹಲಿ (ಐಎಎನ್ಎಸ್): ಉತ್ತರಾಖಂಡದಲ್ಲಿ ಮಳೆ ಅನಾಹುತದಿಂದಾಗಿ ನೂರಾರು ಜನರು ಮೃತಪಟ್ಟು, ಸಾವಿರಾರು ಮಂದಿ ಸಂಕಷ್ಟದಲ್ಲಿ ಇರುವುದರಿಂದ ಕೇಂದ್ರ ಮತ್ತು ಉತ್ತರಪ್ರದೇಶ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ `ಜೈಲ್ ಭರೋ' ಚಳವಳಿಯನ್ನು ಬಿಜೆಪಿ ಸ್ಥಗಿತಗೊಳಿಸಿದೆ.
ಕೇಂದ್ರದ ಹಗರಣಗಳು, ಬೆಲೆ ಏರಿಕೆ, ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ವಿರೋಧಿಸಿ ಈ ತಿಂಗಳ 17ರಿಂದ 30ರ ವರೆಗೆ ಬಿಜೆಪಿ ಜೈಲ್ ಭರೋ ಚಳವಳಿಯನ್ನು ಹಮ್ಮಿಕೊಂಡಿತ್ತು. ಮೊದಲಿಗೆ ಮೇ 27ರಿಂದ ಜೂನ್ 2ರ ವರೆಗೆ ಎಂದು ಈ ಚಳವಳಿ ನಿಗದಿಯಾಗಿತ್ತು. ಆದರೆ ಛತ್ತೀಸಗಡದಲ್ಲಿ ಕಾಂಗ್ರೆಸ್ ಮುಖಂಡರ ಮೇಲೆ ನಕ್ಸಲರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಚಳವಳಿಯನ್ನು ಮುಂದೂಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.