ADVERTISEMENT

ಬಿಜೆಪಿ ಮುಖಂಡನ ಮೇಲೆ ದಾಳಿ ನಡೆಸಿದ್ದ ಉಗ್ರರು ಎನ್‌ಕೌಂಟರ್‌ಗೆ ಬಲಿ

ಏಜೆನ್ಸೀಸ್
Published 16 ಮಾರ್ಚ್ 2018, 6:15 IST
Last Updated 16 ಮಾರ್ಚ್ 2018, 6:15 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಶ್ರೀನಗರ: ಇಲ್ಲಿನ ಹೊರವಲಯದ ಬಲ್ಹಾಮದಲ್ಲಿ ಬಿಜೆಪಿ ಮುಖಂಡ ಮೊಹಮ್ಮದ್‌ ಅನ್ವರ್‌ ಖಾನ್‌  ಮೇಲೆ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಗುರುವಾರ ತಡರಾತ್ರಿ ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ.

ಉಗ್ರರ ದಾಳಿಯಿಂದ ಅನ್ವರ್‌ ಖಾನ್‌ ಅವರು ಪಾರಾಗಿದ್ದು, ಅವರ ಭದ್ರತಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದರು.

‘ಅನ್ವರ್‌ ಅವರು ಇಬ್ಬರು ವೈಯಕ್ತಿಕ ಭದ್ರತಾ ಸಿಬ್ಬಂದಿಯ ಜೊತೆಗಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿ ರೈಫಲ್‌ ಕಸಿಯಲು ಯತ್ನಿಸಿದ್ದಾರೆ. ಸಿಬ್ಬಂದಿ ಪ್ರತಿದಾಳಿ ನಡೆಸಿದಾಗ ಪರಾರಿಯಾಗಿದ್ದಾರೆ’ ಎಂದು ಅಧಿಕಾರಿಗಳು ಹೇಳಿದ್ದರು.

ADVERTISEMENT

ಭದ್ರತಾ ಪಡೆಗಳು ಸ್ಥಳಕ್ಕೆ ತೆರಳಿ ಉಗ್ರರ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.