ಪಟ್ನಾ (ಪಿಟಿಐ): ಬಿಹಾರದ ಕುರಿತು ಕೇಂದ್ರ ಸರ್ಕಾರದ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಾಗೂ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ಇಲ್ಲಿನ ಗಾಂಧಿ ಮೈದಾನದಲ್ಲಿ ಜೆಡಿ(ಯು) ಕೈಗೊಂಡಿರುವ ಸತ್ಯಾಗ್ರಹದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ಪಾಲ್ಗೊಂಡರು.
ಜೆಡಿ (ಯು)ನ ಹಿರಿಯ ನಾಯಕರು ಮತ್ತು ಸಚಿವರೊಂದಿಗೆ ತಮ್ಮ ಅಧಿಕೃತ ನಿವಾಸದಿಂದ ಗಾಂಧಿ ಮೈದಾನಕ್ಕೆ ಆಗಮಿಸಿದ ನಿತೀಶ್ಕುಮಾರ್, ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಧರಣಿ ಕುಳಿತರು.
ಐದು ಗಂಟೆಗಳ ಕಾಲ ಸತ್ಯಾಗ್ರಹದಲ್ಲಿ ಕುಳಿತಿದ್ದ ನಿತೀಶ್ಕುಮಾರ್, ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ರಾಜ್ಯದ ಜನರೊಂದಿಗೆ ಕೈಗೊಂಡಿರುವ ಈ ಸತ್ಯಾಗ್ರಹ ಯಶಸ್ವಿಯಾಗಲಿದೆ. ಅಭಿವೃದ್ಧಿಗಾಗಿ ಬಿಹಾರವೂ ಕೂಡಾ ವಿಶೇಷ ಸ್ಥಾನಮಾನ ಪಡೆಯಲು ಅರ್ಹತೆ ಹೊಂದಿದೆ. ಈ ನಿಟ್ಟಿನಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.