
ಪ್ರಜಾವಾಣಿ ವಾರ್ತೆಪಟ್ನಾ: ಕೈಗಾರಿಕೆ ಮತ್ತು ವಿಪತ್ತು ನಿರ್ವಹಣಾ ಸಚಿವೆ ರೇಣು ಕುಶ್ವಹ ಅವರ ರಾಜೀನಾಮೆಯನ್ನು ಅಂಗೀಕರಿಸಿ ರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ಲೇಸಿ ಸಿಂಗ್ ಅವರನ್ನು ನೂತನ ಸಚಿವೆ ಯಾಗಿ ಸಂಪುಟಕ್ಕೆ ಸೇರಿಸಿ ಕೊಂಡಿದ್ದಾರೆ.
ಲೇಸಿಸಿಂಗ್ ಅವರು ಈ ಹಿಂದೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು.
ರೇಣು ಕುಶ್ವಹ ಅವರ ಪತಿ ವಿಜಯ್ ಸಿಂಗ್ ಪೂರ್ಣಿಯಾದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ರೇಣು ಅವರು ಸೋಮವಾರ ಸಂಜೆಯೇ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದರು. ನಿತೀಶ್ಕುಮಾರ್ ಅವರ ಸಂಪುಟದಿಂದ ಹೊರಬಂದ ಎರಡನೇ ಸಚಿವೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.