ನವದೆಹಲಿ (ಪಿಟಿಐ): ರಾಜಸ್ತಾನದಲ್ಲಿ ಸುಮಾರು 600 ಕೋಟಿ ರೂಪಾಯಿಗೂ ಅಧಿಕ ಬೆಲೆ ಬಾಳುವ ಕೃಷಿ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿರುವ ಗುಜರಾತ್ ರಾಜ್ಯಪಾಲರಾದ ಕಮಲಾ ಬೆನಿವಾಲ್ ಅವರನ್ನು ತಕ್ಷಣ ಹುದ್ದೆಯಿಂದ ತೆಗೆದು ಹಾಕುವಂತೆ ಬಿಜೆಪಿ ನಿಯೋಗ ರಾಷ್ಟ್ರಪತಿಯನ್ನು ಒತ್ತಾಯಿಸಿದೆ.
ಬುಧವಾರ ಪ್ರತಿಭಾ ಪಾಟೀಲ್ ಅವರನ್ನು ಭೇಟಿ ಮಾಡಿದ ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷ ನಿತಿನ್ ಗಡ್ಕರಿ ನೇತೃತ್ವದ ನಿಯೋಗ, ತನ್ನ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಸ್ತಾಂತರಿಸಿತು.
ಬಿಜೆಪಿ ಹಿರಿಯ ನಾಯಕ ಎಲ್. ಕೆ.ಅಡ್ವಾಣಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಮತ್ತು ಇತರ ನಾಯಕರ ಗೈರುಹಾಜರಿ ಎದ್ದು ಕಾಣುತ್ತಿತ್ತು. ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸುದ್ದಿಗಳಿಗೆ ಅನೇಕ ನಾಯಕರ ಗೈರುಹಾಜರಿ ಪುಷ್ಟಿ ನೀಡುವಂತಿತ್ತು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.