ADVERTISEMENT

ಬೇನಿ ವಿರುದ್ಧ ಕ್ರಮ ಕಾಂಗ್ರೆಸ್ ಮೀನಮೇಶ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2013, 19:59 IST
Last Updated 1 ಏಪ್ರಿಲ್ 2013, 19:59 IST

ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಅವರಿಗೆ ಉಗ್ರರ ನಂಟಿದೆ ಎಂಬ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಒಳಗಾಗಿರುವ ಕೇಂದ್ರ ಸಚಿವ ಬೇನಿ ಪ್ರಸಾದ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಮೀನಮೇಷ ಎಣಿಸುತ್ತಿದೆ.

ಕಾಂಗ್ರೆಸ್‌ನಲ್ಲಿರುವ ಕೆಲವು ನಾಯಕರು `ಬೇನಿ ಪ್ರಸಾದ್ ಅವರು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಉತ್ತರ ಪ್ರದೇಶದಲ್ಲಿ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದು,  ಇದಕ್ಕಾಗಿ ಸಮಾಜವಾದಿ ಪಕ್ಷದ ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.