ADVERTISEMENT

‘ಬೇರೆಯವರಿಗೆ ಮಾತನಾಡಲು ಬಿಡುವುದಿಲ್ಲ’

ಪಿಟಿಐ
Published 20 ಅಕ್ಟೋಬರ್ 2017, 19:30 IST
Last Updated 20 ಅಕ್ಟೋಬರ್ 2017, 19:30 IST
‘ಬೇರೆಯವರಿಗೆ ಮಾತನಾಡಲು ಬಿಡುವುದಿಲ್ಲ’
‘ಬೇರೆಯವರಿಗೆ ಮಾತನಾಡಲು ಬಿಡುವುದಿಲ್ಲ’   

ನವದೆಹಲಿ: ‘ಮಿತ್ರರೇ, ‘ಷಾ–ಜಾದಾ’ ಬಗ್ಗೆ ನಾನು ಮಾತನಾಡುವುದೂ ಇಲ್ಲ. ಬೇರೆಯವರು ಮಾತನಾಡಲು ಬಿಡುವುದೂ ಇಲ್ಲ’ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಅಧ್ಯಕ್ಷ ಅಮಿತ್‌  ಷಾ ಅವರ ಮಗ ಜಯ್ ಷಾ ಅವರ ಕಂಪೆನಿಯ ವಹಿವಾಟು 16,000 ಪಟ್ಟು ಹೆಚ್ಚಾಯಿತು ಎಂದು ದಿ ವೈರ್‌ ವರದಿ ಪ್ರಕಟಿಸಿತ್ತು. ಇದರ ವಿರುದ್ಧ ಜಯ್ ಷಾ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿ ಅಹಮದಾಬಾದ್ ನ್ಯಾಯಾಲಯವು ‘ಆ ವರದಿಗೆ ಸಂಬಂಧಿಸಿ ಬೇರೆ ಯಾವುದೇ ವರದಿ ಪ್ರಕಟಿಸಬೇಡಿ’ ಎಂದು ದಿ ವೈರ್‌ ಮೇಲೆ ಸೋಮವಾರ ನಿರ್ಬಂಧ ಹೇರಿತ್ತು.

ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸಿ ರಾಹುಲ್‌ ಈ ಟ್ವೀಟ್ ಮಾಡಿದ್ದಾರೆ. ನ್ಯಾಯಾಲಯದ ಈ ಆದೇಶವನ್ನು ಪ್ರಕಟಿಸಿರುವ ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆಯ ವರದಿಯನ್ನು ರಾಹುಲ್ ತಮ್ಮ ಟ್ವೀಟ್‌ನಲ್ಲಿ ಟ್ಯಾಗ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.