ನವದೆಹಲಿ (ಪಿಟಿಐ): ಅತಿಗಣ್ಯರಿಗಾಗಿ ಬಳಸಲು ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಅಗಸ್ಟಾ ವೆಸ್ಟ್ಲ್ಯಾಂಡ್ ಕಂಪೆನಿ ನೀಡಿರುವ ₨2360 ಕೋಟಿ ಮೊತ್ತದ ಬ್ಯಾಂಕ್ ಖಾತರಿಯನ್ನು ನಗದೀಕರಿಸಿಕೊಳ್ಳುವ ಭಾರತದ ಪ್ರಯತ್ನಕ್ಕೆ ಇಟಲಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಇಟಲಿ ನ್ಯಾಯಾಲಯದ ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಭಾರತ ನಿರ್ಧರಿಸಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಮಂಗಳವಾರ ಇಲ್ಲಿ ತಿಳಿಸಿದರು.
ಅತಿಗಣ್ಯರ ಬಳಕೆಗಾಗಿ ಅಗಸ್ಟಾವೆಸ್ಟ್ ಲ್ಯಾಂಡ್ ಕಂಪೆನಿಯಿಂದ ₨3600 ಕೋಟಿ ಮೌಲ್ಯದ ಹೆಲಿಕಾಪ್ಟರ್ಗಳನ್ನು ಖರೀದಿಸಲು ಭಾರತ ಒಪ್ಪಂದ ಮಾಡಿಕೊಂಡಿತ್ತು. ಆದರೆ ಇದರಲ್ಲಿ ಯಾವುದೇ ಲಂಚದ ವ್ಯವಹಾರ ಇರಬಾರದು ಎಂಬ ಷರತ್ತು ವಿಧಿಸಿತ್ತು. ಈ ಷರತ್ತು ಉಲ್ಲಂಘಸಿದಕ್ಕಾಗಿ ದಂಡದ ರೂಪದಲ್ಲಿ ಬ್ಯಾಂಕ್ ಭದ್ರತೆ ನಗದೀಕರಿಸಿಕೊಳ್ಳಲು ಭಾರತ ಮುಂದಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.