ADVERTISEMENT

ಭಾರತೀಯರ ತಾಳ್ಮೆ ಪರೀಕ್ಷೆ ಮಾಡಬೇಡಿ: ಲೆ.ಜ. ಪರ್ನಾಯಕ್

​ಪ್ರಜಾವಾಣಿ ವಾರ್ತೆ
Published 15 ಜನವರಿ 2013, 10:30 IST
Last Updated 15 ಜನವರಿ 2013, 10:30 IST
ಭಾರತೀಯರ ತಾಳ್ಮೆ ಪರೀಕ್ಷೆ ಮಾಡಬೇಡಿ: ಲೆ.ಜ. ಪರ್ನಾಯಕ್
ಭಾರತೀಯರ ತಾಳ್ಮೆ ಪರೀಕ್ಷೆ ಮಾಡಬೇಡಿ: ಲೆ.ಜ. ಪರ್ನಾಯಕ್   

ನವದೆಹಲಿ (ಪಿಟಿಐ): ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸುವ ಮೂಲಕ ಭಾರತೀಯರ ತಾಳ್ಮೆ ಪರೀಕ್ಷೆ ಮಾಡುತ್ತಿರುವುದು ಸರಿಯಲ್ಲ ಎಂದು ಸೇನಾ ಕಮಾಂಡರ್ ಲೆಪ್ಟಿನೆಂಟ್ ಜನರಲ್ ಕೆ.ಟಿ. ಪರ್ನಾಯಕ್ ಪಾಕ್‌ಗೆ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತೀಯ ಸೇನೆಗೆ ಪಾಕ್ ಸೈನಿಕರ ಸವಾಲು ದೊಡ್ಡದೇನಲ್ಲ ಆದರೆ ನಾವು ಗಡಿಯಲ್ಲಿ ಶಾಂತಿಯನ್ನು ಬಯಸುತ್ತೇವೆ ಎಂದು ತಿಳಿಸಿದರು.

ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದು ಅಂತರರಾಷ್ಟ್ರೀಯ ಸಮುದಾಯಕ್ಕೂ ತಿಳಿದಿದೆ. ಹೀಗೆಯೆ ಮುಂದುವರೆದರೆ ಭಾರತ ಕೈಕಟ್ಟಿ ಕೂರುವುದಿಲ್ಲ ಎಂದು ಪರ್ನಾಯಕ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.