ADVERTISEMENT

ಭಾರತ ಕಳವಳ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2011, 19:30 IST
Last Updated 12 ಅಕ್ಟೋಬರ್ 2011, 19:30 IST

ನವದೆಹಲಿ (ಪಿಟಿಐ): ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಚೀನಾ ಸೈನಿಕರು ಕಾಣಿಸಿಕೊಂಡಿರುವುದಕ್ಕೆ ಭಾರತ ಕಳವಳ ವ್ಯಕ್ತಪಡಿಸಿದ್ದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಿರುವುದಾಗಿ ಹೇಳಿದೆ.

`ನಾವು ಚೀನಾ ಬಳಿ ನಮ್ಮ ಕಳವಳವ್ಯಕ್ತಪಡಿಸಿದ್ದೇವೆ. ಇದೇ ವೇಳೆ ಯಾವುದೇ ಸವಾಲು ಎದುರಿಸಲು ಸೇನಾ ಸಾಮರ್ಥ್ಯ ಬಲಪಡಿಸಿಕೊಳ್ಳುತ್ತಿದ್ದೇವೆ~ ಎಂದು ರಕ್ಷಣಾ ಸಚಿವ ಆಂಟನಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT