
ಪ್ರಜಾವಾಣಿ ವಾರ್ತೆನವದೆಹಲಿ, (ಐಎಎನ್ಎಸ್): ರಕ್ಷಣಾ ಸಂಬಂಧವನ್ನು ಇನ್ನಷ್ಟು ಬಲಪಡಿಸಿಕೊಳ್ಳಲು ಭಾರತ ಮತ್ತು ವಿಯೆಟ್ನಾಂ ಒಪ್ಪಿಕೊಂಡಿವೆ.
ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಮತ್ತು ವಿಯೆಟ್ನಾಂ ವಿದೇಶಾಂಗ ಸಚಿವ ಫಾಂ ಬಿನ್ಹಾಮಿಹಾ ಅವರು ಹನಾಯ್ಯಲ್ಲಿ ರಕ್ಷಣಾ ಸಂಬಂಧ ಬಲಪಡಿಸುವ ಒಪ್ಪಂದಕ್ಕೆ ಸಹಿ ಹಾಕಿರುವ ಕುರಿತ ವಿವರಗಳನ್ನು ಶನಿವಾರ ಇಲ್ಲಿನ ವಿದೇಶಾಂಗ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಯೆಟ್ನಾಂ ನೌಕಾಪಡೆ ಯೋಧರಿಗೆ ರಷ್ಯಾ ನಿರ್ಮಿತ ಜಲಾಂತರ್ಗಾಮಿ ನಿರ್ವಹಣೆಗೆ ಅಗತ್ಯವಾದ ತರಬೇತಿಯನ್ನು ನೀಡಲು ಭಾರತ ಒಪ್ಪಿಕೊಂಡಿದೆ.
ಕೃಷ್ಣ ಅವರು ಹನಾಯ್ಗೆ ಮೂರು ದಿನಗಳ ಅಧಿಕೃತ ಪ್ರವಾಸ ಕೈಗೊಂಡಿದ್ದು ವ್ಯಾಪಾರ, ಬಂಡವಾಳ ಹೂಡಿಕೆ, ಶಿಕ್ಷಣ, ಸಾಂಸ್ಕೃತಿಕ ರಂಗಗಳಲ್ಲಿ ಇನ್ನೂ ಹೆಚ್ಚಿನ ಸಹಕಾರ ಸಾಧಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.