ಲಖನೌ: ಭಾರತ ಇನ್ನು ಬಲಹೀನವಲ್ಲ ಎಂದು ಚೀನಾ ಅರಿತುಕೊಂಡಿದೆ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದರು.
‘ಭಾರತದ ಗಡಿಗಳು ಸಂಪೂರ್ಣ ಸುರಕ್ಷಿತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನೇತೃತ್ವದಲ್ಲಿ ಭಾರತ ಪ್ರಬಲ ದೇಶ ಎನಿಸಿಕೊಂಡಿದೆ. ಜಾಗತಿಕ ಮಟ್ಟದಲ್ಲೂ ದೇಶದ ಗೌರವ ಹೆಚ್ಚಿದೆ’ ಎಂದು ಅವರು ಹೇಳಿದರು.
ಭಾರತೀಯ ಲೋಧಿ ಮಹಾಸಭಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾನತಾಡಿದ ಅವರು ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡರು. ನೆರೆದೇಶವು ಭಾರತಕ್ಕೆ ಭಯೋತ್ಪಾದಕರನ್ನು ಕಳುಹಿಸುತ್ತಿದೆ ಎಂದು ಆರೋಪಿಸಿದರು. ‘ಪಾಕಿಸ್ತಾನವು ಭಾರತವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ನಮ್ಮ ಸೈನಿಕರು ಗಡಿಯಲ್ಲಿ ಪ್ರತಿನಿತ್ಯ 2–4 ಉಗ್ರರನ್ನು ಸದೆಬಡಿಯುತ್ತಿದ್ದಾರೆ’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.