ADVERTISEMENT

ಭಿಕ್ಷಾಟನೆ ಅಪರಾಧ ಹೇಗಾಗುತ್ತದೆ: ಹೈಕೋರ್ಟ್

ಪಿಟಿಐ
Published 16 ಮೇ 2018, 19:30 IST
Last Updated 16 ಮೇ 2018, 19:30 IST

ನವದೆಹಲಿ : ಸರ್ಕಾರವು ಆಹಾರ ಹಾಗೂ ಉದ್ಯೋಗ ನೀಡದಿದ್ದಲ್ಲಿ, ಭಿಕ್ಷಾಟನೆಯು ಅಪರಾಧ ಹೇಗಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ. ಭಿಕ್ಷಾಟನೆಯನ್ನು ನ್ಯಾಯಸಮ್ಮತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಎರಡು ಅರ್ಜಿಗಳನ್ನು ಹಂಗಾಮಿ ಮುಖ್ಯನ್ಯಾಯಮೂರ್ತಿ ಗೀತಾ ಮಿತ್ತಲ್ ಹಾಗೂ ನ್ಯಾಯಮೂರ್ತಿ ಸಿ. ಹರಿಶಂಕರ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ವ್ಯಕ್ತಿಯೊಬ್ಬ ತನಗೆ ತೀರಾ ಅನಿವಾರ್ಯತೆಯಿದ್ದಾಗ ಮಾತ್ರ ಭಿಕ್ಷಾಟನೆಗೆ ಇಳಿಯುತ್ತಾನೆ. ಅದು ಆತನ ಆಯ್ಕೆಯಾಗಿರುವುದಿಲ್ಲ ಎಂದು ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಬಡತನದಿಂದ ಭಿಕ್ಷಾಟನೆ ಮಾಡಿದರೆ ಅದು ಅಪರಾಧವಾಗುವುದಿಲ್ಲ. ಆದರೆ ಭಿಕ್ಷಾಟನೆಯನ್ನು ನ್ಯಾಯಸಮ್ಮತಗೊಳಿಸಬಾರದು ಎಂದು ಕೇಂದ್ರ ಸರ್ಕಾರ ಈ ಮೊದಲು ಹೈಕೋರ್ಟ್‌ಗೆ ತಿಳಿಸಿತ್ತು.

ADVERTISEMENT

ಭಿಕ್ಷುಕರಿಗೆ ಮಾನವೀಯ ಹಾಗೂ ಮೂಲಭೂತ ಹಕ್ಕುಗಳನ್ನು ನೀಡಬೇಕು ಎಂದು ಕೋರಿ ಹರ್ಷ ಮಂದಾರ್ ಹಾಗೂ ಕಾರ್ಣಿಕಾ ಸೌಹ್ನಿ ಅವರು ಪಿಐಎಲ್ ಸಲ್ಲಿಸಿದ್ದರು. ಆಹಾರ ಹಾಗೂ ವೈದ್ಯಕೀಯ ಸೌಲಭ್ಯಗಳನ್ನೂ ಒದಗಿಸಬೇಕು ಎಂದು ಕೋರಿದ್ದರು. ‘ಬಾಂಬೆ ಭಿಕ್ಷಾಟನೆ ತಡೆ ಕಾಯ್ದೆ’ಯನ್ನೂ ಅರ್ಜಿದಾರರು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.