ಆಗ್ರಾ (ಐಎಎನ್ಎಸ್): ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕುಚೇಷ್ಟೆಗೆಂದು ಕಳುಹಿಸಿದ ಎಸ್ಎಂಎಸ್, ಭೂಕಂಪದ ಭೀತಿಗೆ ಕಾರಣವಾಗಿ ಕೆಲಕಾಲ ಜನರಲ್ಲಿ ಗಲಿಬಿಲಿುನ್ನು ಉಂಟುಮಾಡಿತು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹೆಸರಿನಲ್ಲಿ (ಎನ್ಡಿಎಂಎ) ಕಳುಹಿಸಲಾದ ಈ ಸಂದೇಶವು ಭೂಕಂಪದ ವೇಳೆ ತೆಗೆದುಕೊಳ್ಳಬೇಕಾದ ಎಚ್ಚರಿಕೆಯ ಕ್ರಮಗಳನ್ನು ಒಳಗೊಂಡಿತ್ತು.
ಭೂಕಂಪಕ್ಕೆ ಮುನ್ನ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಸುರಕ್ಷಿತ ಸ್ಥಳಗಳನ್ನು ಗುರುತಿಸಿಕೊಳ್ಳಿ, ಅಗತ್ಯ ಔಷಧಿಗಳನ್ನು ಇಟ್ಟುಕೊಳ್ಳಿ- ಎನ್ಡಿಎಂಎ ಎಂದು ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅಜಯ್ ಚೌಹಾಣ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.