ADVERTISEMENT

ಭೂಷಣ್‌ಗೆ ದಂಡ

​ಪ್ರಜಾವಾಣಿ ವಾರ್ತೆ
Published 6 ಜನವರಿ 2012, 19:30 IST
Last Updated 6 ಜನವರಿ 2012, 19:30 IST

ಅಲಹಾಬಾದ್ (ಪಿಟಿಐ): ಜಮೀನು ಖರೀದಿಗೆ ಸಂಬಂಧಿಸಿದಂತೆ ಅಣ್ಣಾ ತಂಡದ ಸದಸ್ಯ ಶಾಂತಿ ಭೂಷಣ್ 1.35 ಕೋಟಿ ರೂಪಾಯಿ ಮುದ್ರಾಂಕ ಶುಲ್ಕವನ್ನು ಪಾವತಿಸದೇ ವಂಚಿಸಿದ್ದಾರೆ ಎನ್ನಲಾಗಿದ್ದು, ಇದೀಗ ಅವರಿಗೆ 27 ಲಕ್ಷ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿದೆ.

ಇಲ್ಲಿನ ಪ್ರತಿಷ್ಠಿತ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಖರೀದಿಸಲಾದ 7,818 ಚದರ ಮೀಟರ್ ಅಳತೆಯ ಆಸ್ತಿಗೆ ಸಂಬಂಧಿಸಿದಂತೆ ಶಾಂತಿ ಭೂಷಣ್ ಇದುವರೆಗೆ ಕೇವಲ 46,700 ರೂಪಾಯಿ ಪಾವತಿಸ್ದ್ದಿದಾರೆ ಎಂದು ಸಹಾಯಕ ಮುದ್ರಾಂಕ ಆಯುಕ್ತ ಕೆ.ಪಿ.ಪಾಂಡೆ ತಿಳಿಸಿದ್ದಾರೆ.

ಈ ಸಂಬಂಧ ಕಳೆದ ಫೆಬ್ರುವರಿ ತಿಂಗಳಲ್ಲಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.