ADVERTISEMENT

`ಭೂಸ್ವಾಧೀನ ಕಾಯ್ದೆ'ಗೆ ರಾಜ್ಯಸಭೆ ಅಸ್ತು

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2013, 20:18 IST
Last Updated 4 ಸೆಪ್ಟೆಂಬರ್ 2013, 20:18 IST

ನವದೆಹಲಿ: ವಿವಿಧ ಕಾರಣಗಳಿಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಯತ ಪರಿಹಾರ ಒದಗಿಸುವ ಉದ್ದೇಶದ ಮಹತ್ವಾಕಾಂಕ್ಷೆಯ `ಭೂಸ್ವಾಧೀನ ಮತ್ತು ಪುನರ್ವಸತಿ ಮಸೂದೆ'ಯನ್ನು ರಾಜ್ಯಸಭೆ ಬುಧವಾರ ರಾತ್ರಿ ಅನುಮೋದಿಸಿತು.

ಮಸೂದೆಯ ಪರವಾಗಿ 131 ಮತಗಳು ಹಾಗೂ ವಿರುದ್ಧವಾಗಿ 10 ಮತಗಳು ಬಿದ್ದವು.

ಮೇಲ್ಮನೆಯಲ್ಲಿ ಕೆಲ ತಿದ್ದುಪಡಿಗಳೊಂದಿಗೆ ಅಂಗೀಕಾರಗೊಂಡಿರುವ ಮಸೂದೆಯು ಈಗ ಪುನಃ ಲೋಕಸಭೆಯ ಮುಂದೆ ಚರ್ಚೆಗೆ ಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.