ADVERTISEMENT

ಭ್ರಷ್ಟರಿಗೆ ಕಠಿಣ ಸಂದೇಶ ರವಾನೆ- ಭೂಷಣ್

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2012, 19:30 IST
Last Updated 2 ಫೆಬ್ರುವರಿ 2012, 19:30 IST

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು `ಐತಿಹಾಸಿಕ~ವಾದುದು ಎಂದು ಬಣ್ಣಿಸಿರುವ  ಖ್ಯಾತ ವಕೀಲ ಪ್ರಶಾಂತ್ ಭೂಷಣ್, ಇದು ಅಕ್ರಮಗಳ ಮೂಲಕ ಲಾಭ ಪಡೆಯುವ ಕಾರ್ಪೊರೇಟ್ ಸಂಸ್ಥೆಗಳಿಗೆ ಮತ್ತು ಸಾರ್ವಜನಿಕ ಸೇವೆಗಳಲ್ಲಿರುವ ಭ್ರಷ್ಟರಿಗೆ ಕಠಿಣ ಸಂದೇಶ ರವಾನಿಸಿದೆ ಎಂದಿದ್ದಾರೆ.

ಮುಖ್ಯವಾಗಿ ಭ್ರಷ್ಟ ಕಾರ್ಪೊ ರೇಟ್ ಸಂಸ್ಥೆಗಳು ಮತ್ತು ಭ್ರಷ್ಟ ಸಾರ್ವಜನಿಕ ಅಧಿಕಾರಿಗಳು ಅಕ್ರಮಗಳ ಮೂಲಕ ಲಾಭಗಳಿಸುವುದಕ್ಕೆ ಈ ದೇಶವು  ಇನ್ನು ಮುಂದೆ ಅವಕಾಶ ನೀಡುವುದಿಲ್ಲ ಎಂಬ ಸ್ಪಷ್ಟ ಸಂಕೇತ ರವಾನಿಸಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.