ಪುಣೆ, (ಪಿಟಿಐ): ಸಾರ್ವಜನಿಕ ಕ್ಷೇತ್ರದಲ್ಲಿನ ಭ್ರಷ್ಟಾಚಾರ ತಡೆಯಲು, ಭ್ರಷ್ಟಾಚಾರದಲ್ಲಿ ತೊಡಗಿದ ಆಪಾದನೆ ಹೊತ್ತ ವ್ಯಕ್ತಿಯನ್ನು ಸರ್ಕಾರದ ಅನುಮತಿ ಪಡೆಯದೇ ನ್ಯಾಯಾಲಯಕ್ಕೆ ಒಪ್ಪಿಸುವ ಅಧಿಕಾರ ಲೋಕಾಯುಕ್ತಕ್ಕೆ ಇರಬೇಕು~ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ ಪ್ರತಿಪಾದಿಸಿದ್ದಾರೆ
ಅವರು ಬುಧವಾರ ಇಲ್ಲಿನ ಕಾನೂನು ಕಾಲೇಜು ವಿದ್ಯಾರ್ಥಿಗಳು ಆಯೋಜಿಸಿದ್ದ ಸಮಾರಂಭವೊಂದರಲ್ಲಿ ಮಾತನಾಡುತ್ತಿದ್ದರು.
~ಲೋಕಾಯುಕ್ತಕ್ಕೆ ಶಿಕ್ಷೆ ನೀಡುವ ಅಧಿಕಾರ ಬೇಡ. ಭ್ರಷ್ಟಾಚಾರ ಪ್ರಕರಣವನ್ನು ಸಾಬೀತು ಪಡಿಸಲು ಅಧಿಕಾರ ಬೇಕು. ಜೊತೆಗೆ ಸರ್ಕಾರದ ಅನುಮತಿ ಪಡೆಯದೇ ಭ್ರಷ್ಟಾಚಾರದಲ್ಲಿ ತೊಡಗಿದ ಆಪಾದನೆ ಹೊತ್ತವರನ್ನು ನ್ಯಾಯಾಲಯಕ್ಕೆ ಒಪ್ಪಿಸುವ ಅಧಿಕಾರ ಬೇಕು~ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.