ADVERTISEMENT

ಮತ್ತೆ ಕದನ ವಿರಾಮ ಉಲ್ಲಂಘನೆ: 3 ಯೋಧರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2017, 19:30 IST
Last Updated 4 ಅಕ್ಟೋಬರ್ 2017, 19:30 IST

ಜಮ್ಮು/ಇಸ್ಲಾಮಾಬಾದ್‌ : ಪಾಕಿಸ್ತಾನ ಸೇನೆ ಸತತ ಮೂರನೇ ದಿನವಾದ ಬುಧವಾರವೂ ಕದನ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ನಡೆಸಿದ ಅಪ್ರಚೋದಿತ ಗುಂಡು ಮತ್ತು ಶೆಲ್‌ ದಾಳಿಯಲ್ಲಿ ಮೂವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯೂ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ತನ್ನ ಇಬ್ಬರು ನಾಗರಿಕರು ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.

ವಾರದಲ್ಲಿ ಎರಡನೇ ಬಾರಿ ಪಾಕಿಸ್ತಾನದಲ್ಲಿರುವ ಭಾರತೀಯ ಡೆಪ್ಯೂಟಿ ಹೈಕಮಿಷನರ್‌ ಜೆ.ಪಿ. ಸಿಂಗ್‌ ಅವರನ್ನು ಕರೆಸಿಕೊಂಡ ಪಾಕಿಸ್ತಾನದ ಸರ್ಕಾರ ತನ್ನ ಪ್ರತಿಭಟನೆ ದಾಖಲಿಸಿದೆ. ಭಾರತ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದೆ.

ADVERTISEMENT

ಪಾಕಿಸ್ತಾನ ಮಂಗಳವಾರ ನಡೆಸಿದ ದಾಳಿಯಲ್ಲಿ ಭಾರತೀಯ ಯೋಧರೊಬ್ಬರು ಮೃತಪಟ್ಟಿದ್ದರು. ಅ.2ರಂದು ಇಬ್ಬರು ಬಾಲಕರು ಮೃತಪಟ್ಟು, 12 ನಾಗರಿಕರು ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.