ADVERTISEMENT

ಮಮತಾ ಜತೆ ಪ್ರಧಾನಿ ಚರ್ಚೆ ಇಲ್ಲ: ಸರ್ಕಾರ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2012, 19:30 IST
Last Updated 12 ಮಾರ್ಚ್ 2012, 19:30 IST

ನವದೆಹಲಿ (ಪಿಟಿಐ): ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಕಾಶ್ ಸಿಂಗ್ ಬಾದಲ್ ಅಧಿಕಾರ ಸ್ವೀಕರಿಸುವ ಸಮಾರಂಭಕ್ಕೆ ತೆರಳಬಾರದೆಂದು ಮಮತಾ ಬ್ಯಾನರ್ಜಿ ಅವರ ಜತೆ ಪ್ರಧಾನಿ ಮನಮೋಹನ್ ಸಿಂಗ್ ಮಾತುಕತೆ ನಡೆಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

`ಈ ಸಂಬಂಧ ಪ್ರಧಾನಿ ಅವರಾಗಲೀ ಅಥವಾ ಹಣಕಾಸು ಸಚಿವರಾಗಲೀ ಮಮತಾ ಅವರೊಂದಿಗೆ ಚರ್ಚೆ ನಡೆಸಿಲ್ಲ~ ಎಂದು ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ರಾಜೀವ್ ಶುಕ್ಲ ಇಲ್ಲಿ ಸುದ್ದಿಗಾರರಿಗೆ ಹೇಳಿದ್ದಾರೆ.

ಪ್ರಧಾನಿ ಮತ್ತು ಗೃಹ ಸಚಿವರು ಮಾತುಕತೆ ನಡೆಸಿದ ನಂತರ ಮಮತಾ ಬ್ಯಾನರ್ಜಿಯವರು ಪ್ರಕಾಶ್ ಸಿಂಗ್  ಪ್ರಮಾಣ ವಚನ ಸ್ವೀಕಾರದಲ್ಲಿ ಪಾಲ್ಗೊಳ್ಳದಿರುವ ನಿರ್ಧಾರ ಕೈಗೊಂಡರು ಎಂಬ ವರದಿಗಳ ಹಿನ್ನೆಲೆಯಲ್ಲಿ ಶುಕ್ಲ ಹೀಗೆ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.