ಚೆನ್ನೈ (ಪಿಟಿಐ): ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಶನಿವಾರವಷ್ಟೇ ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಾದಿಯಲ್ಲಿಯೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರೂ ಸಾಗಲಿದ್ದಾರೆ.
ಬೆಲೆ ಪರಿಷ್ಕರಣೆ? |
ಕೇಂದ್ರ ಸರ್ಕಾರವು ಏಕಾಏಕಿ ಭಾರಿ ಪ್ರಮಾಣದಲ್ಲಿ ಪೆಟ್ರೋಲ್ ಬೆಲೆ ಹೆಚ್ಚಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ 88 ವರ್ಷದ ಡಿಎಂಕೆ ಮುಖ್ಯಸ್ಥ, ಇದೇ 30ರಂದು ನಡೆಯಲಿರುವ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ.
ಬಂದ್: ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ತ್ರಿಪುರಾದ ಆಡಳಿತಾರೂಢ ಎಡರಂಗ ಸರ್ಕಾರ ಇದೇ 31ರಂದು ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಿದೆ.ಶನಿವಾರ ನಡೆದ ಎಡರಂಗದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಪಕ್ಷದ ಸಂಚಾಲಕ ಬಿಜನ್ ಧಾರ್ ತಿಳಿಸಿದ್ದಾರೆ.ಅಧಿವೇಶನ ಮುಗಿದ ಕೂಡಲೇ ಪೆಟ್ರೋಲ್ ಬೆಲೆ ಹೆಚ್ಚಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಟೀಕಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.