ಮುಂಬೈ (ಐಎಎನ್ಎಸ್): ಮಹಾರಾಷ್ಟ್ರ ರಾಜ್ಯದಾದ್ಯಂತ ಗುರುವಾರ ಮಹಾವೀರ ಜಯಂತಿಯನ್ನು ಆಚರಿಸಲಾಯಿತು.
ನಗರವೂ ಸೇರಿದಂತೆ ರಾಜ್ಯದ ಇತರೆಡೆ ಜೈನ ಸಮುದಾಯದವರು ಜೈನ ಮಂದಿರಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಧಾರ್ಮಿಕ ಉಪನ್ಯಾಸ ಏರ್ಪಡಿಸಲಾಗಿತ್ತು.
ಭಗವಾನ್ ಮಹಾವೀರ ಜಯಂತಿ ಪ್ರಯುಕ್ತ ಧಾರ್ಮಿಕ ರ್ಯಾಲಿಗಳು ಜರುಗಿದವು. ಮಹಿಳೆಯರು ಸೇರಿದಂತೆ ಹೆಚ್ಚಿನ ಜನರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.