ADVERTISEMENT

ಮಾಜಿ ಶಾಸಕನ ಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2013, 19:59 IST
Last Updated 19 ಜುಲೈ 2013, 19:59 IST
ಬಿಎಸ್‌ಪಿ ಮುಖಂಡ ಸರ್ವೇಶ್ ಸಿಂಗ್ ಸೀಪು ಅವರನ್ನು ಅಪರಿಚಿತರು ಗುಂಡಿಕ್ಕಿ ಕೊಂದಿರುವ ಘಟನೆಯನ್ನು ವಿರೋಧಿಸಿ ಅವರ ಬೆಂಬಲಿಗರು ಶುಕ್ರವಾರ ಅಜಂಗಡ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದರು
ಬಿಎಸ್‌ಪಿ ಮುಖಂಡ ಸರ್ವೇಶ್ ಸಿಂಗ್ ಸೀಪು ಅವರನ್ನು ಅಪರಿಚಿತರು ಗುಂಡಿಕ್ಕಿ ಕೊಂದಿರುವ ಘಟನೆಯನ್ನು ವಿರೋಧಿಸಿ ಅವರ ಬೆಂಬಲಿಗರು ಶುಕ್ರವಾರ ಅಜಂಗಡ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದರು   

ಅಜಂಗಡ (ಪಿಟಿಐ): ಮಾಜಿ ಶಾಸಕ ಹಾಗೂ ಬಿಎಸ್‌ಪಿ ಮುಖಂಡ ಸರ್ವೇಶ್ ಸಿಂಗ್ ಸೀಪು (35) ಅವರನ್ನು ಅಪರಿಚಿತರು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ.

ಘಟನೆಯಲ್ಲಿ ಸರ್ವೇಶ್ ಸಿಂಗ್ ಜತೆ ನರದ್ ರೈ (40) ಎಂಬುವವರನ್ನೂ ಹತ್ಯೆ ಮಾಡಲಾಗಿದೆ. ಘಟನೆ ನಂತರ ಸೀಪು ಅವರ ಬೆಂಬಲಿಗರು ನಡೆಸಿದ ಹಿಂಸಾಚಾರದಲ್ಲಿ ಇತರ ಆರು ಮಂದಿ ಗಾಯಗೊಂಡಿದ್ದಾರೆ. ಗಲಭೆ ನಿಯಂತ್ರಿಸಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಹಾರಿಸಿದ ಗುಂಡಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ.

ಸೀಪು ಬೆಂಬಲಿಗರು ಇಲ್ಲಿನ ಜಿಯಾನ್‌ಪುರ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದರು. ಪೊಲೀಸರಿಂದ ಬಂದೂಕು ಕಿತ್ತುಕೊಂಡು, ಕಲ್ಲು ತೂರಾಟ ನಡೆಸಿ, ಠಾಣೆಗೆ ಬೆಂಕಿ ಹಚ್ಚಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.