ನವದೆಹಲಿ: ಗುರುವಾರದಿಂದ ಉಪವಾಸ ನಡೆಸಲಿರುವ ಮಂಡ್ಯ ಜಿಲ್ಲೆಯ ಹಿರಿಯ ಮುಖಂಡ ಜಿ. ಮಾದೇಗೌಡರಿಗೆ ಈ ನಿರ್ಧಾರ ಕೈಬಿಡಬೇಕೆಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮನವಿ ಮಾಡಿದ್ದಾರೆ.
`ಮಾದೇಗೌಡರು ವಯಸ್ಸಿನಲ್ಲಿ ನನಗಿಂತ ಹಿರಿಯರು. ಇಳಿ ವಯಸ್ಸಿನಲ್ಲಿ ಉಪವಾಸ ಮಾಡುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ತೀರ್ಮಾನದಿಂದ ಹಿಂದೆ ಸರಿಯುವಂತೆ ಅವರಿಗೆ ಮನವಿ ಮಾಡುತ್ತೇನೆ~ ಎಂದು ದೇವೇಗೌಡರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
`ಕಾವೇರಿ ನದಿ ಪಾತ್ರದ ರೈತರು ಉದ್ವೇಗಕ್ಕೆ ಒಳಗಾಗದೆ ತಾಳ್ಮೆ ವಹಿಸಬೇಕು. ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ ಆಗಿರುವುದು ಆತಂಕಕ್ಕೆ ಕಾರಣವಾಗಿದೆ. ಕುಡಿಯುವ ನೀರಿಗೂ ಸಮಸ್ಯೆ ಆಗಲಿದೆ~ ಎಂದು ಜೆಡಿಎಸ್ ವರಿಷ್ಠರೂ ಆದ ದೇವೇಗೌಡರು ನುಡಿದರು.
ಹಿರಿಯ ವಕೀಲ ಎಫ್.ಎಸ್. ನಾರಿಮನ್ ಸೇರಿದಂತೆ ಕಾವೇರಿ ವಿವಾದದಲ್ಲಿ ರಾಜ್ಯದ ಪರ ಹಾಜರಾಗುತ್ತಿರುವ ವಕೀಲರ ತಂಡವನ್ನು ಭೇಟಿ ಮಾಡಿ ಚರ್ಚಿಸಿರುವುದಾಗಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.