ಲಖನೌ (ಪಿಟಿಐ): ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಅಳವಡಿಸಿರುವ, ಮುಖ್ಯಮಂತ್ರಿ ಮಾಯಾವತಿ ಮತ್ತು ಅವರ ಪಕ್ಷದ ಚಿಹ್ನೆಯಾದ `ಆನೆ~ ಗುರುತಿನ ಪ್ರತಿಮೆಗಳಿಗೆ ವಿಧಾನಸಭಾ ಚುನಾವಣೆ ಪೂರ್ಣಗೊಳ್ಳುವವರೆಗೂ ಹೊದಿಕೆ ಹೊದಿಸುವಂತೆ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ.ಖುರೇಷಿ ಶನಿವಾರ ಆದೇಶಿಸಿದ್ದಾರೆ.
ಈ ವಿಷಯ ಚುನಾವಣಾ ನೀತಿ ಸಂಹಿತೆಗೆ ಸಂಬಂಧಪಟ್ಟಿರುವ ಕಾರಣ, ಆದಷ್ಟು ಶೀಘ್ರದಲ್ಲಿ ಈ ಕಾರ್ಯ ನಡೆಯಬೇಕು ಎಂದು ಅವರು ಹೇಳಿದ್ದಾರೆ.
`ಚುನಾವಣೆ ಸಂದರ್ಭದಲ್ಲಿ ಯಾರೊಬ್ಬರೂ ರಾಜಕೀಯ ಲಾಭ ಪಡೆಯಲು ಅವಕಾಶ ನೀಡು ವುದಿಲ್ಲ. ಕೆಲವು ಕಚೇರಿಗಳಲ್ಲಿ ಹಾಕಿ ರುವ ಮುಖಂಡರ ಭಾವಚಿತ್ರಗಳನ್ನು ಸಹ ತೆಗೆಯಲಾಗುತ್ತದೆ~ ಎಂದು ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿರುವ ಆಯುಕ್ತರು ಸುದ್ದಿಗಾರರಿಗೆ ತಿಳಿಸಿದರು.
ಇತ್ತೀಚಿಗೆ ಸಭೆಯಲ್ಲಿ, ಮಾಯಾವತಿ ಮತ್ತು ಆನೆಯ ಪ್ರತಿಮೆ ಬಗ್ಗೆ ರಾಜಕೀಯ ಪಕ್ಷಗಳು ಆಕ್ಷೇಪ ಎತ್ತಿದ್ದ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.