ನವದೆಹಲಿ (ಪಿಟಿಐ): ಪಾರದರ್ಶಕ ಸಮಾಜಕ್ಕಾಗಿ ಹೋರಾಡುತ್ತಿರುವ ಮಾಹಿತಿ ಹಕ್ಕು ಕಾರ್ಯಕರ್ತರಿಗೆ ಹೆಚ್ಚಿನ ಸುರಕ್ಷತೆ ಒದಗಿಸುವ ನೀತಿ ರೂಪಿಸಲು ಸರ್ಕಾರಿ ನಿಯೋಜಿತ ವಿಶೇಷ ಕಾರ್ಯಪಡೆ ಸರ್ಕಾರವನ್ನು ಒತ್ತಾಯಿಸಿದೆ.
ಈ ಕುರಿತು ಚರ್ಚಿಸಲು ಜೂನ್ ಕೊನೆಯಲ್ಲಿ ಗೃಹ ಇಲಾಖೆ ಪ್ರತಿನಿಧಿಯೊಬ್ಬರ ಉಪಸ್ಥಿತಿಯಲ್ಲಿ ಸಭೆ ಕರೆಯಲಾಗುವುದು ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಷ್ಟ್ರದಲ್ಲಿ, ಮಾಹಿತಿ ಹಕ್ಕು ಕಾರ್ಯಕರ್ತರ ಮೇಲೆ ಹಿಂಸಾತ್ಮಕ ಹಲ್ಲೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಆಗ್ರಹ ಕೇಳಿಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.