ನವದೆಹಲಿ: ₹8 ಸಾವಿರ ಕೋಟಿ ಮೊತ್ತದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮಗಳು, ಸಂಸದೆ ಮೀಸಾ ಭಾರತಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ.
ವೈಯಕ್ತಿಕ ಹಣಕಾಸು ವ್ಯವಹಾರಗಳ ದಾಖಲೆಗಳು ಸೇರಿದಂತೆ ಇತರ ಕೆಲವು ದಾಖಲೆಗಳೊಂದಿಗೆ ಮಂಗಳವಾರ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಭಾರತಿ ಅವರ ಪತಿ ಶೈಲೇಶ್ ಕುಮಾರ್ ಅವರಿಗೂ ಸಮನ್ಸ್ ನೀಡುವ ಸಾಧ್ಯತೆ ಇದೆ. ಇ.ಡಿ ಅಧಿಕಾರಿಗಳು ಜುಲೈ 8ರಂದು ಮೀಸಾ ದಂಪತಿ ಮಾಲೀಕತ್ವದ ಮೂರು ತೋಟದ ಮನೆಗಳು ಮತ್ತು ಅವರು ನಿರ್ದೇಶಕರಾಗಿದ್ದರು ಎಂದು ಹೇಳಲಾದ ಸಂಸ್ಥೆಯ ಮೇಲೆ ದಾಳಿ ಮಾಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.