ADVERTISEMENT

ಮೇಲ್ಸೇತುವೆ ಕುಸಿತ: ವ್ಯವಸ್ಥಾಪಕ ನಿರ್ದೇಶಕ ವಜಾ

ಪಿಟಿಐ
Published 17 ಮೇ 2018, 19:30 IST
Last Updated 17 ಮೇ 2018, 19:30 IST

ಲಖನೌ : ವಾರಾಣಸಿಯ ರೈಲು ನಿಲ್ದಾಣ ಬಳಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿತಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಸೇತುವೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಜನ್‌ ಮಿತ್ತಲ್‌ ಅವರನ್ನು ಉತ್ತರ ಪ್ರದೇಶ ಸರ್ಕಾರ ವಜಾಗೊಳಿಸಿದೆ.

ಮಿತ್ತಲ್‌ ಅವರನ್ನು ಅಧಿಕಾರದಿಂದ ತೆಗೆಯಲಾಗಿದ್ದು, ಮುಖ್ಯ ಎಂಜಿನಿಯರ್‌ ಜೆ.ಕೆ. ಶ್ರೀನಿವಾಸ್ ಅವರನ್ನು ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಲೋಕೋಪಯೋಗಿ ಇಲಾಖೆಯ ಸಚಿವ ಕೇಶವ ಮೌರ್ಯ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT