ಪಶ್ಚಿಮ ಬಂಗಾಳ: ನನ್ನ ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕೋಲ್ಕತ್ತದ ನಜ್ರುಲ್ ಮಂಚ್ನಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಬುಧವಾರ ಮಾತನಾಡಿದರು.
‘ಮೊಬೈಲ್ ಸಂಪರ್ಕವನ್ನು ಕಡಿತಗೊಳಿಸಿದರೂ ಪರವಾಗಿಲ್ಲ. ಯಾವುದೇ ಕಾರಣಕ್ಕೂ ನನ್ನ ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸುವುದಿಲ್ಲ’ ಎಂದಿದ್ದಾರೆ.
ಹೊಸ ಮೊಬೈಲ್ ಸಿಮ್ ಸಂಪರ್ಕ ಪಡೆಯಲು ಬಯಸುವವರು ಇನ್ನು ಮುಂದೆ ಆಧಾರ್ ಆಧಾರಿತ ವಿದ್ಯುನ್ಮಾನ–ದೃಢೀಕರಣ (ಇ–ಕೆವೈಸಿ: ಎಲೆಕ್ಟ್ರಾನಿಕ್–ನೋ ಯುವರ್ ಕಸ್ಟಮರ್) ಅರ್ಜಿಯನ್ನು ಭರ್ತಿ ಮಾಡಬೇಕಾಗುತ್ತದೆ ಎಂದು ಟೆಲಿಕಾಂ ಇಲಾಖೆ ಹೊಸ ನಿಯಮವನ್ನು ಜಾರಿಗೊಳಿಸಿರುವ ಕುರಿತು ಮಮತಾ ಬ್ಯಾನರ್ಜಿ ಮಾತನಾಡಿದರು.
ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸುವುದರಿಂದ ನಮ್ಮ ಖಾಸಗಿ ಹಕ್ಕಿಗೆ ತೊಂದರೆ ಉಂಟಾಗುತ್ತದೆ ಎಂದಿರುವ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಧಾರ್ ಕಡ್ಡಾಯ ನಿಯಯ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸಬೇಕೆಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.