ನವದೆಹಲಿ: ಐದು ತಿಂಗಳಲ್ಲಿ ತಮ್ಮ ಆಸ್ತಿ ಎರಡು ಪಟ್ಟು ಹೆಚ್ಚಾಗಿರುವ ಕುರಿತು ಪ್ರಕಟವಾದ ವರದಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರಿಗೆ ಸ್ವಯಂ ಪ್ರೇರಣೆಯಿಂದ ವಿವರಣೆ ಕೊಡುವುದಾಗಿ ರೈಲ್ವೆ ಸಚಿವ ಡಿ.ವಿ. ಸದಾನಂದಗೌಡ ಸ್ಪಷ್ಟಪಡಿಸಿದ್ದಾರೆ.
‘ನನ್ನ ಆಸ್ತಿ ಎರಡು ಪಟ್ಟು ಹೆಚ್ಚಾಗಿರುವುದಾಗಿ ಪ್ರಕಟವಾದ ವರದಿ ಕುರಿತು ಪ್ರಧಾನಿ ಸ್ಪಷ್ಟನೆ ಕೇಳಿಲ್ಲ. ಆದರೆ, ಈ ಬಗ್ಗೆ ಉಂಟಾಗಿರುವ ಗೊಂದಲವನ್ನು ನಿವಾರಣೆ ಮಾಡಲು ಸ್ವಯಂ ಪ್ರೇರಿತವಾಗಿ ವಿವರಣೆ ನೀಡುತ್ತೇನೆ’ ಎಂದು ಸದಾನಂದಗೌಡ ಸೋಮವಾರ ರಾತ್ರಿ ‘ಪ್ರಜಾವಾಣಿ’ಗೆ ತಿಳಿಸಿದರು.
‘ಹಿಂದೆ ನನ್ನ ಮಗನ ಮೇಲೆ ಆರೋಪಗಳು ಬಂದಾಗಲೂ ಮೋದಿ ಅವರಿಗೆ ವಿವರಣೆ ನೀಡಿದ್ದೆ. ಆ ಪರಂಪರೆಯನ್ನು ಮುಂದುವರಿಸುತ್ತೇನೆ. ಬಿಜೆಪಿ ಅಧ್ಯಕ್ಷ ಅಮಿತ್ ಷಾ ಮತ್ತಿತರ ಹಿರಿಯ ನಾಯಕರಿಗೂ ಸತ್ಯವೇನೆಂದು ವಿವರಿಸುತ್ತೇನೆ’ ಎಂದು ಸದಾನಂದ ಗೌಡ ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.