ADVERTISEMENT

ಮೋಸ ಹೋದೆವು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2012, 19:30 IST
Last Updated 20 ಏಪ್ರಿಲ್ 2012, 19:30 IST

ತಿರುವನಂತಪುರ(ಐಎಎನ್‌ಎಸ್): ಇಟಲಿಯ ನೌಕಾ ಸಿಬ್ಬಂದಿ ಭಾರತೀಯ ಮೀನುಗಾರರಿಬ್ಬರನ್ನು ಗುಂಡಿಕ್ಕಿ ಕೊಂದ ಪ್ರಕರಣವು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ; ಈ ಘಟನೆಯು ಅಂತರ ರಾಷ್ಟ್ರೀಯ ಜಲಪ್ರದೇಶದಲ್ಲಿ ನಡೆದಿದೆ, ಹಾಗಾಗಿ ಕೇರಳ ಸರ್ಕಾರಕ್ಕೆ ಪ್ರಕರಣ ದಾಖಲಿಸುವ ಅಧಿಕಾರ ಇಲ್ಲ ಎಂದು  ಸರ್ಕಾರಿ ವಕೀಲರು ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ.

ಈ ಸುದ್ದಿ ಹರಡುತ್ತಿದ್ದಂತೆಯೇ, ಮೀನುಗಾರರ ವಲಯ ಮತ್ತು  ಹತ್ಯೆಗೀಡಾದ ಮೀನುಗಾರರ ಕುಟುಂಬದಲ್ಲಿ ಆಕ್ರೋಶ  ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.