ADVERTISEMENT

ಯಶೋಮತಿ ಎಐಸಿಸಿ ಕಾರ್ಯದರ್ಶಿ

ಮಹಾರಾಷ್ಟ್ರದ ಕಾಂಗ್ರೆಸ್‌ ಶಾಸಕಿಗೆ ಕರ್ನಾಟಕದ ಹೊಣೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 19:30 IST
Last Updated 31 ಮಾರ್ಚ್ 2018, 19:30 IST

ನವದೆಹಲಿ: ಮಹಾರಾಷ್ಟ್ರದ ಅಮರಾವತಿ ಭಾಗದ ಶಾಸಕಿ ಯಶೋಮತಿ ಠಾಕೂರ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯ
ದರ್ಶಿಯಾಗಿ ಶನಿವಾರ ನೇಮಕ ಮಾಡಲಾಗಿದೆ.

ಕರ್ನಾಟಕದ ಉಸ್ತುವಾರಿ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಜತೆಗೆ ಠಾಕೂರ್ ಕಾರ್ಯನಿರ್ವಹಿಸಲಿದ್ದಾರೆ.

ಮರಾಠಿ ಭಾಷಿಕರು ಹೆಚ್ಚಾಗಿರುವ ಮುಂಬೈ–ಕರ್ನಾಟಕ ಭಾಗದಲ್ಲಿ ಠಾಕೂರ್, ಪಕ್ಷದ ಚಟುವಟಿಕೆಗಳ ನಿಗಾ ವಹಿಸಲಿದ್ದಾರೆ. ಈಚೆಗೆ ಮೇಘಾಲಯ
ದಲ್ಲಿ ನಡೆದ ಚುನಾವಣೆಯಲ್ಲಿ ಸಹ ಸಮನ್ವಯಕಾರರಾಗಿ ಅವರು ಕೆಲಸ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.