ADVERTISEMENT

ಯಾಕೂಬ್ ಗೆ ಮರುಕ ತೋರುವವರು ಪಾಕ್ ಗೆ ಹೋಗಲಿ

ಸಾಕ್ಷಿ ಮಹಾರಾಜ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2015, 11:42 IST
Last Updated 1 ಆಗಸ್ಟ್ 2015, 11:42 IST

ಹೃಷಿಕೇಶ(ಪಿಟಿಐ): ವಿವಾದಾತ್ಮಕ ಹೇಳಿಕೆಗೆ ಹೆಸರಾಗಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್, 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್‌ ಮೆಮನ್‌ನನ್ನು ಗಲ್ಲಿಗೇರಿಸಿರುವುದಕ್ಕೆ ಮರುಕ ತೋರುವವರು ರಾಷ್ಟ್ರ ವಿರೋಧಿಗಳು. ಸಂವಿಧಾನದ ಬಗ್ಗೆ ನಂಬಿಕೆ ಇಲ್ಲದವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಶನಿವಾರ ಹೇಳಿಕೆ ನೀಡಿದ್ದಾರೆ.

ಯಾಕೂಬ್ ನನ್ನು ಉಳಿಸಲು ಪ್ರಯತ್ನಿಸಿದವರ ಕುಟುಂಬದವರು ಯಾರಾದರೂ ಸ್ಫೋಟದಲ್ಲಿ ಮೃತಪಟ್ಟಿದ್ದರೆ ಯಾಕೂಬ್ ಪರವಾಗಿ ಕೆಲಸ ಮಾಡುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.