ADVERTISEMENT

ಯಾತ್ರಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್‌ ಪತನ: ಇಂಜಿನಿಯರ್ ಸಾವು

ಪಿಟಿಐ
Published 10 ಜೂನ್ 2017, 4:51 IST
Last Updated 10 ಜೂನ್ 2017, 4:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಯಾತ್ರಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು ಒಬ್ಬ ಇಂಜಿನಿಯರ್ ಮೃತಪಟ್ಟ ಘಟನೆ ಬದರಿನಾಥದ ಬಳಿ ಸಂಭವಿಸಿದೆ. ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ.‌

ಹೆಲಿಕಾಪ್ಟರ್‌ನಲ್ಲಿ ಸಿಬ್ಬಂದಿ ಹೊರತುಪಡಿಸಿ ಐವರು ಪ್ರಯಾಣಿಕರಿದ್ದರು. ಅವರೆಲ್ಲ ಸುರಕ್ಷಿತರಾಗಿದ್ದಾರೆ.

ಮುಂಬೈನ ಖಾಸಗಿ ಕಂಪೆನಿಗೆ ಸೇರಿದ ‘ಅಗಸ್ಟಾ 119’ ಹೆಲಿಕಾಪ್ಟರ್ ಬದರಿನಾಥದಿಂದ ಹರಿದ್ವಾರಕ್ಕೆ ಯಾತ್ರಿಗಳನ್ನು ಕರೆದೊಯ್ಯುತ್ತಿತ್ತು. ಬದರಿನಾಥದಿಂದ ಪ್ರಯಾಣ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಗಿದೆ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.